ಮಂಗಳೂರು | ಮುಸ್ಲಿಮ್ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಬಂಧನವಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಿಡುಗಡೆ

Prasthutha|

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ಬಸ್ಸಿನಿಂದ ಇಳಿಸಿ ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ಬಂಧನವಾದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿರುವುದು ಬೆಳಕಿಗೆ ಬಂದಿದೆ.

- Advertisement -


ಮನೋಹರ್, ಚೇತನ್, ಕಿಶೋರ್ ವಿರುದ್ಧ ಐಪಿಸಿ ಕಲಂ 504,506,323,324,342,352 ಹಾಗೂ 34 IPC ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ ಸ್ಟೇಷನ್ ಬೇಲ್ ನಲ್ಲಿ ಅವರನ್ನು ಕಳೆದ ರಾತ್ರಿಯೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಮೇಸ್ತ್ರಿ ಕೆಲಸ ಮಾಡುತ್ತಿರುವ ಇಸಾಕ್ ಅವರು ಬುಧವಾರ ಬೆಳಗ್ಗೆ ಬಿ.ಸಿ.ರೋಡ್’ನಿಂದ ಮೂಡಬಿದ್ರೆಗೆ ಹೋಗುವಾಗ ಖಾಸಗಿ ಬಸ್ ಕಂಡೆಕ್ಟರ್ ಮತ್ತು ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿರುವ ಇಸಾಕ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp