Home ಟಾಪ್ ಸುದ್ದಿಗಳು ಮಂಗಳೂರು: ಕುಟುಂಬ ಎದುರಿಸುತ್ತಿದ್ದ ಆರ್ಥಿಕ ಸಂಕಷ್ಟದಿಂದ ನೊಂದು ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಮಂಗಳೂರು: ಕುಟುಂಬ ಎದುರಿಸುತ್ತಿದ್ದ ಆರ್ಥಿಕ ಸಂಕಷ್ಟದಿಂದ ನೊಂದು ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಮಂಗಳೂರು: ಕುಟುಂಬ ಎದುರಿಸುತ್ತಿದ್ದ ಆರ್ಥಿಕ ಸಂಕಷ್ಟದಿಂದ ಬೇಸತ್ತು ಕಾಲೇಜು ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಉಳ್ಳಾಲ ಬಗಂಬಿಲ ನಿವಾಸಿ ಹರ್ದೀಪ್ (20) ಮೃತ ವಿದ್ಯಾರ್ಥಿ. ಶ್ರೀದೇವಿ ಕಾಲೇಜಿನಲ್ಲಿ ಬಿಬಿಎಂ ಎರಡನೇ ವರ್ಷದಲ್ಲಿ ಕಲಿಯುತ್ತಿದ್ದ ಹರ್ದೀಪ್ ನಿನ್ನೆ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ. ಎಷ್ಟೇ ಹೊತ್ತಾದರೂ ಕೊಠಡಿಯ ಬಾಗಿಲು ತೆರೆಯದಾಗ ಮನೆಯವರು ಒಳಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.


ತಕ್ಷಣ ಯೆನೆಪೋಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಟುಂಬ ಎದುರಿಸುತ್ತಿದ್ದ ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Join Whatsapp
Exit mobile version