Home ಕರಾವಳಿ ಮಂಗಳೂರು: ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ಪಿಕ್‌ಅಪ್, ಚಾಲಕನ ರಕ್ಷಣೆ

ಮಂಗಳೂರು: ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ಪಿಕ್‌ಅಪ್, ಚಾಲಕನ ರಕ್ಷಣೆ

ಮಂಗಳೂರು: ಸೇತುವೆ ದಾಟುತ್ತಿದ್ದಾಗ ಹೊಳೆಯಲ್ಲಿ ಏಕಾಏಕಿ ನೀರು ಉಕ್ಕಿ ಹರಿದ ಹಿನ್ನೆಲೆಯಲ್ಲಿ ಮಹೀಂದ್ರಾ ಪಿಕ್‌ಅಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಬಳಿ ನಡೆದಿದೆ. ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಸುಳ್ಯ ಭಾಗದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರಿನಲ್ಲಿ ನದಿ ನೀರಿನ ಹೆಚ್ಚಳವಾಗಿದೆ. ಸುಳ್ಯ ತಾಲೂಕಿನ ಕಲ್ಮಕಾರು ಬಳಿ ಹೊಳೆಗೆ ನಿರ್ಮಿಸಲಾದ ಸೇತುವೆ ಮೇಲೆ ಇಂದು ತೆಂಗಿನಕಾಯಿ ಲೋಡ್ ಮಾಡಿಕೊಂಡು ಪಿಕಪ್‌ಅಪ್‌ ವಾಹನ ಹೋಗುತ್ತಿತ್ತು. ಈ ವೇಳೆ ಏಕಾಏಕಿ ನೀರು ಉಕ್ಕಿ ಹರಿದಿದೆ. ನೀರಿನ ರಭಸಕ್ಕೆ ಪಿಕ್ ಅಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ತಕ್ಷಣ ಎಚ್ಚೆತ್ತ ಸ್ಥಳೀಯರು ಚಾಲಕನನ್ನು ರಕ್ಷಿಸಿದ್ದಾರೆ.

Join Whatsapp
Exit mobile version