ದಕ್ಷಿಣ ಕನ್ನಡದಲ್ಲಿ ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ನಿಷೇದಾಜ್ಞೆ | ಜಿಲ್ಲಾಧಿಕಾರಿ ಆದೇಶ

Prasthutha|

►ಇಂದಿನಿಂದ ಸೆಕ್ಷನ್ 144ಜಾರಿ

- Advertisement -

ಮಂಗಳೂರು : ಕೊರೊನಾ ವೈರಸ್‌ ಸೋಂಕು 2ನೇ ಅಲೆ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಮಾರ್ಚ್‌ 29ರಿಂದಲೇ 144 ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

- Advertisement -

ಇದು ಮಾತ್ರವಲ್ಲದೆ ಸಾರ್ವಜನಿಕರು ಗುಂಪಾಗಿ ಹೆಚ್ಚು ಸೇರುವಂತಹ ಜಾತ್ರೆ, ಮೇಳ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್‌ 29 ರಿಂದ ಮುಂದಿನ ಸೂಚನೆಯ ವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

Join Whatsapp