ಕುದ್ರೋಳಿ: ಸಂಜೆ 3ರಿಂದ 7 ಪ್ರವೇಶ ನಿರ್ಬಂಧ

Prasthutha|

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಅ.13 ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಜೆ 3 ರಿಂದ 7.00 ಗಂಟೆಯವರೆಗೆ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7ರಿಂದ ಎಂದಿನಂತೆ ದರ್ಶನಕ್ಕೆ ಅವಕಾಶ ನೀಡಲಾಗುವುದು.

- Advertisement -

ಮುಖ್ಯಮಂತ್ರಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp