ಮಂಗಳೂರು: ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ

Prasthutha|

ಮಂಗಳೂರು: ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ ( ಇ ಆರ್ ಎಸ್ ಎಸ್ ) ನ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ ಮಹಿಳಾ ಸುರಕ್ಷತೆಗಾಗಿ ಒಂದು ದಿನ ‘ ಕಾರ್ಯಕ್ರಮಕ್ಕೆ ಅರ್ಜುನ ಪ್ರಶಸ್ತಿ ಪುರಸ್ಮತೆ ಎಂ.ಆರ್. ಪೂವಮ್ಮ ಚಾಲನೆ ನೀಡಿದರು.

- Advertisement -


ಬಳಿಕ ಮಾತನಾಡಿದ ಅವರು ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಕಾರ್ಯಕ್ರಮ ಮಹಿಳೆಯರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.


ಇದೇ ವೇಳೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ ಯಾವುದೇ ತುರ್ತು ಸಂದರ್ಭದಲ್ಲಿ ಮಹಿಳೆಯರಾಗಲಿ ಅಥವಾ ಇತರ ಯಾರೇ ಆಗಲಿ 112 ಗೆ ಕರೆ ಮಾಡಿದಾಗ ನಗರ ವ್ಯಾಪ್ತಿಯಲ್ಲಿ ಸ್ಥಳೀಯ ಠಾಣೆಯ ಪೊಲೀಸರು 5 ರಿಂದ 10 ನಿಮಿಷಗಳಲ್ಲಿ ಹಾಗೂ ಹೊರವಲಯದಲ್ಲಾದರೆ 15 ನಿಮಿಷಗಳೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆ ನಿವಾರಿಸಲಿದ್ದಾರೆ ಎಂದರು.

- Advertisement -

Join Whatsapp