ಮಂಗಳೂರು: ಮುಸ್ಲಿಮ್ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

Prasthutha|

ಸುರತ್ಕಲ್: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ಸಂಘಪರಿವಾರದ ಕಾರ್ಯಕರ್ತರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕರಂಬಾರು ಎಂಬಲ್ಲಿ ನಡೆದಿದೆ.

- Advertisement -

ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕ.

ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್‌ನೊಂದಿಗೆ ಕರಂಬಾರಿನಿಂದ ಬಜ್ಜೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ ಗಾಯಗಳಾಗಿವೆ. ಅವರನ್ನು ತಕ್ಷಣ ಬಜ್ಜೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಘಟನೆಯ ಕುರಿತು ಮಾಹಿತಿ ಪಡೆದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp