ಮಂಗಳೂರು | ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಅನುಚಿತ ವರ್ತನೆ, ಮಾರಣಾಂತಿಕ ಹಲ್ಲೆ: ಮೂವರ ಬಂಧನ

Prasthutha|

- Advertisement -

ಕರ್ತವ್ಯ ದಲ್ಲಿದ್ದ ಪೊಲೀಸರ ಮೇಲೆ ಬೈಕ್ ಹರಿಸಲು ಯತ್ನಿಸಿದ ದುಷ್ಕರ್ಮಿಗಳು

ಮಂಗಳೂರು: ನಗರದ ಉರ್ವ ಚಿಲಿಂಬಿಗುಡ್ಡೆಯಲ್ಲಿ ಕಳೆದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ಅನುಚಿತವಾಗಿ ವರ್ತಿಸಿ ಮಾರಣಾಂತಿಕ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಶ್ರೀರಾಮ ಸೇನೆಯ ಕಾರ್ಯಕರ್ತರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಶ್ರೀರಾಮ ಸೇನೆಯ ಕಾರ್ಯಕರ್ತರಾದ
ಚಿಲಿಂಬಿಗುಡ್ಡೆ ನಿವಾಸಿಗಳಾದ ದುರ್ಗೇಶ್, ಪ್ರಜ್ವಿತ್, ರಕ್ಷಿತ್ ಬಂಧಿತ ಆರೋಪಿಗಳು.
ಗಾಯಗೊಂಡ ಪೊಲೀಸ್ ಸಿಬ್ಬಂದಿ ವೆಂಕಟೇಶ್ ಮತ್ತು ಧನಂಜಯ್ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಉರ್ವ ಪೊಲೀಸ್ ಠಾಣೆಯ ಸಿಬ್ವಂದಿ ಸೋಮವಾರ ತಡರಾತ್ರಿ 1.30ರ ವೇಳೆಗೆ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಶ್ರೀರಾಮ ಸೇನೆಗೆ ಸೇರಿದ ಸುಮಾರು 8 ಮಂದಿ ಯುವಕರ ತಂಡ ರಸ್ತೆ ಬದಿ ಮದ್ಯಪಾನ ಮಾಡಿ ಗದ್ದಲವೆಬ್ಬಿಸುತ್ತಾ ಹರಟೆ ಹೊಡೆಯುತ್ತಿತ್ತು. ಈ ಸಂದರ್ಭ ಪೊಲೀಸರು ವಿಚಾರಣೆ ನಡೆಸಿದ್ದು, ಇದಕ್ಕೆ ತಗಾದೆ ತೆಗೆದ ಪಾನಮತ್ತ ತಂಡ ಪೊಲೀಸರ ಮೇಲೆ ಅನುಚಿತವಾಗಿ ವರ್ತಿಸಿ ಇಬ್ಬರು ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಒಬ್ಬಾತ ಪೊಲೀಸರ ಮೇಲೆ ಬೈಕ್ ಚಲಾಯಿಸಲು ಯತ್ನಿಸಿದ್ದಾನೆ. ಬಳಿಕ ತಂಡ ಅಲ್ಲಿಂದ ಪರಾರಿಯಾಗಿದೆ.
ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

Join Whatsapp