ಮಂಗಳೂರು: ಲಾಠಿ ಚಾರ್ಜ್ ಖಂಡಿಸಿ PFI ನಿಂದ ಎಸ್ಪಿ ಚಲೋ ಆರಂಭ: ಹರಿದು ಬಂದ ಜನಸ್ತೋಮ

Prasthutha|

ಮಂಗಳೂರು: ಉಪ್ಪಿನಂಗಡಿಯಲ್ಲಿ ನಡೆದ ಹಿಂಸಾಚಾರ- ಲಾಠಿ ಚಾರ್ಜ್ ಖಂಡಿಸಿ ಪಿಎಫ್ ಐ ಕರೆ ನೀಡಿದ್ದ ಎಸ್ಪಿ ಚಲೋ ಮಂಗಳೂರಿನ ಕ್ಲಾಕ್ ಟವರ್ ಬಳಿಯಿಂದ ಆರಂಭಗೊಂಡು ಎಸ್.ಪಿ.ಕಚೇರಿಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಪೊಲೀಸರು ಬ್ಯಾರಿ ಕೇಡ್ ಗಳನ್ನು ಇಟ್ಟು ತಡೆದರು. ಇದರಿಂದ ಪ್ರತಿಭಟನಕಾರರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿ, ಘೋಷಣೆ ಕೂಗಿದರು.

- Advertisement -

ಜಿಲ್ಲೆಯ ಮೂಲೆಮೂಲೆಗಳಿಂದ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಕಾರರು ಮಂಗಳೂರಿಗೆ ಆಗಮಿಸಿದ್ದು, ಪ್ರತಿಭಟನೆಯ ಕಾವು ಹೆಚ್ಚಾಗಿದೆ.

ಎಸ್.ಪಿ.ಕಚೇರಿ ಚಲೋ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು,ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಂಗಳೂರು ನಗರದ ಹಂಪನಕಟ್ಟೆ, ಕ್ಲಾಕ್ ಟವರ್ , ಸ್ಟೇಟ್ ಬ್ಯಾಂಕ್ ಪ್ರದೇಶಗಳಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ.

- Advertisement -

ಹಂಪನ ಕಟ್ಟೆ ಮತ್ತು ಸುತ್ತಮುತ್ತಲ ಪ್ರಮುಖ ರಸ್ತೆಗಳನ್ನು ಪೊಲೀಸರು ತಾತ್ಕಾಲಿಕವಾಗಿ ಮುಚ್ಚಿದ್ದಾರೆ. ಕೇವಲ ಸಭೆ ನಡೆಸಲು ಕ್ಲಾಕ್ ಟವರ್ ಬಳಿ ಅನುಮತಿ ನೀಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Join Whatsapp