Home ಟಾಪ್ ಸುದ್ದಿಗಳು ಮಂಗಳೂರು: ಭಾರೀ ಮಳೆಗೆ ಧರಾಶಾಹಿಯಾದ ಬೃಹತ್ ಮರ

ಮಂಗಳೂರು: ಭಾರೀ ಮಳೆಗೆ ಧರಾಶಾಹಿಯಾದ ಬೃಹತ್ ಮರ

ಮಂಗಳೂರು: ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಲೇಡಿಹಿಲ್ ನಾರಾಯಣ ಗುರು ವೃತ್ತದಿಂದ ಉರ್ವಾ ಸ್ಟೋರ್ ವರೆಗಿನ ಮುಖ್ಯರಸ್ತೆ ಸಂಪೂರ್ಣ ಬಂದ್ ಆಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಲೇಡಿಹಿಲ್ ಬಸ್ ನಿಲ್ದಾಣದ ಬಳಿ ಇರುವ ಮರವು ಧಾರಾಕಾರ ಮಳೆಗೆ ಧರಾಶಾಹಿಯಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ.

Join Whatsapp
Exit mobile version