ಮಂಗಳೂರು | ದುರ್ಬಲ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಸೆಕೆ !

Prasthutha|

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸೆಕೆ ಅನುಭವ ಹೆಚ್ಚುತ್ತಿದೆ.
ಮುಂಗಾರು ಕ್ಷೀಣಿಸಿದ ಕಾರಣ
ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಹವಾಮಾನ ಇಲಾಖೆ ಪ್ರಕಾರ, ಸದ್ಯ ಮುಂಗಾರು ದುರ್ಬಲಗೊಂಡಿದ್ದು, ಸದ್ಯಕ್ಕೆ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ. ಮಂಗಳೂರಿನಲ್ಲಿ ಶನಿವಾರದಂದು ಗರಿಷ್ಠ ತಾಪಮಾನ 29.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 23.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Join Whatsapp