Home ಟಾಪ್ ಸುದ್ದಿಗಳು ಮಂಗಳೂರು | ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ: ಆಸ್ಪತ್ರೆಗೆ ದಾಖಲು

ಮಂಗಳೂರು | ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ: ಆಸ್ಪತ್ರೆಗೆ ದಾಖಲು

ಮಂಗಳೂರು: ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿರುವ ಘಟನೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ನಡೆದಿದೆ.


ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದಾಗ ಆಯತಪ್ಪಿ ಬಿದ್ದಿದ್ದಾನೆ. ಯುವಕನ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿ ಗಾಯಗೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಯುವಕ ಪ್ರಯಾಪಾಯದಿಂದ ಪಾರಾಗಿದ್ದಾನೆ.

Join Whatsapp
Exit mobile version