ಮಂಗಳೂರು: ನೋಟಿನ ಕಂತೆ ಪತ್ತೆ ಪ್ರಕರಣ| ಠಾಣೆಗೆ ಹಾಜರಾದ ವಾರಸುದಾರ

Prasthutha|

ಮಂಗಳೂರು : ನಗರದ ಪಂಪ್ ವೆಲ್ ನಲ್ಲಿ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

- Advertisement -

ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದು ಕೊಂಡು ಹೋಗುವಾಗ ಬಿದ್ದಿದೆ. ಅದರಲ್ಲಿ ಒಟ್ಟು 10 ಲ.ರೂ. ಇತ್ತು ಎಂದು ಅವರು ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ನ. 26ರಂದು ಸ್ಥಳೀಯ ನಿವಾಸಿಗಳಾದ ಶಿವರಾಜ್ ಮತ್ತು ತುಕಾರಾಮ್ ಅವರಿಗೆ ಪಂಪ್ ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್ ಗಳು ಸಿಕ್ಕಿದ್ದವು.

Join Whatsapp