ಮತ್ತೆ ಭೂಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

Prasthutha|

ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

- Advertisement -

ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿತಗೊಂಡಿದೆ.


ಕಳೆದ ಒಂದು ಗಂಟೆಯಿಂದ ಸಕಲೇಶಪುರ ತಾಲ್ಲೂಕಿನ, ಬಾಳ್ಳುಪೇಟೆ ಬಳಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ನಿಂತಿದ್ದು, ರೈಲು ನಿಲುಗಡೆಯಿಂದ ಪ್ರಯಾಣಿಕರ ಪರದಾಟ ಅನುಭವಿಸುವಂತಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ.



Join Whatsapp