Home ಟಾಪ್ ಸುದ್ದಿಗಳು ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ 3 ಡ್ರಗ್ ಪೆಡ್ಲರ್ ಗಳ ಸೆರೆ

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ 3 ಡ್ರಗ್ ಪೆಡ್ಲರ್ ಗಳ ಸೆರೆ

 ಮಂಗಳೂರು:  “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ (Methylene dioxy methamphetamine) MDMA ಅನ್ನು  ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ದಸ್ತಗಿರಿ ಮಾಡಿರುತ್ತಾರೆ.

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ KA-50-N-8081 ನೇ ಬಿಳಿ ಬಣ್ಣದ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಮೂವರು ಮಾದಕ ವಸ್ತುವಾದ MDMA ನೇದನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಾರಾಟ ಸಾರ್ವಜನಿಕರಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಸಿಸಿಬಿ ಪೊಲೀಸರು ದಾಳಿ ನಡೆಸಿ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಹಫೀಝ್ @ ಅಪ್ಪಿ(35), ಅಮೀರ್@ ಅಮ್ಮಿ(34), ಜಾಕೀರ್ ಹುಸೇನ್ @ ತಾಚೀ(28 ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಒಟ್ಟು 200 ಗ್ರಾಂ ತೂಕದ ರೂ. 10,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000/- ಮೌಲ್ಯದ 3 ಮೊಬೈಲ್ ಫೋನ್ ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 15,70,500/-ಆಗಬಹುದು. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಮೊಹಮ್ಮದ್ ಹಫೀಸ್@ ತಾಚ್ಚಿ ಎಂಬಾತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಮಂಗಳೂರು ದಕ್ಷಿಣ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣಗಳು, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣ, ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಜ್ಯಾರಿಯಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ಹಫೀಸ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಪ್ರಕರಣ, ಬಂಟ್ವಾಳ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Join Whatsapp
Exit mobile version