ಮಂಗಳೂರು ಪಾಲಿಕೆ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ

Prasthutha|

ಉಡುಪಿ: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದ್ರಾಳಿ ರೈಲ್ವೆ ಬ್ರಿಜ್ ಬಳಿ ನಡೆದಿದೆ.

- Advertisement -


ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ.


ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

- Advertisement -


ಮಣಿಪಾಲ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.

Join Whatsapp