Home ಕರಾವಳಿ ಮಂಗಳೂರು: ಐಟಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಬಂಧನ

ಮಂಗಳೂರು: ಐಟಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಬಂಧನ

ಮಂಗಳೂರು: ಬಿಜೆಪಿ ಸರ್ಕಾರ ಇ.ಡಿ. ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಫಳ್ನೀರ್ ನ ಎಸ್.ಎಲ್ ಮಥಾಯಿಸ್ ಪಾರ್ಕ್ ನಿಂದ ಅತ್ತಾವರದ ಐ.ಟಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಐಟಿ ಕಚೇರಿವರೆಗೆ ಮೆರವಣಿಗೆ ಹೊರಟ ಕಾರ್ಯಕರ್ತರನ್ನು ಮಾರ್ಗ ಮಧ್ಯೆ ತಡೆದ ಪೊಲೀಸರು ವಶಕ್ಕೆ ಪಡೆದರು.
ಮಾಜಿ ಸಚಿವ ರಮಾನಾಥ್ ರೈ , ಐವಾನ್ ಡಿಸೋಜಾ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Join Whatsapp
Exit mobile version