ಮಂಗಳೂರು : ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಅಮಾನತು!

Prasthutha|

ಮಂಗಳೂರು: ಸಂಚಾರ ಉತ್ತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುಹಮ್ಮದ್ ಶರೀಫ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

- Advertisement -

ಇಲಾಖೆಯ ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆಯದೆ ವಿದೇಶಕ್ಕೆ ಪ್ರಯಾಣಿಸಿದ್ದಕ್ಕಾಗಿ ಶರೀಫ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾರ್ಚ್ 16 ರಿಂದ ಅಜ್ಮೀರ್ ಗೆ ಭೇಟಿ ನೀಡಲು ರಜೆ ತೆಗೆದುಕೊಂಡು ನಂತರ ದುಬೈಗೆ ತೆರಳಿದ್ದರು. ವಿದೇಶಕ್ಕೆ ಪ್ರಯಾಣಿಸಲು ಬಯಸಿದರೆ, ಡಿಜಿಪಿಯಿಂದ ಪೂರ್ವಾನುಮತಿ ಪಡೆಯಬೇಕಾಗುತ್ತದೆ.ಇವರು ಸೋಮವಾರ ಮಂಗಳೂರಿಗೆ ಮರಳಿದ್ದಾರೆ. ಮುಂದಿನ ಆದೇಶದವರೆಗೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರು ಗೋಲಿಬಾರ್ ವೇಳೆ ಅಮಾನುಷ ವಾಗಿ ನಡೆದು ಕೊಂಡು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದರು.

Join Whatsapp