Home ಕರಾವಳಿ ಮಂಗಳೂರು: ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಮಂಗಳೂರು: ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಮಂಗಳೂರು: ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಗಳಿಗೆ ದಾಳಿ ನಡೆಸಿದ ಕರ್ನಾಟಕ ಲೋಕಾಯುಕ್ತ ಪೊಲೀಸರು 40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯ ಬಗ್ಗೆ ದೂರುಗಳು ಲೋಕಾಯುಕ್ತ ಸಂಸ್ಥೆಗೆ ಬಂದ ಹಿನ್ನೆಲೆಯಲ್ಲಿ   ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್‌ ಕೆ.ಅವರು ಡಿವೈಎಸ್‌ಪಿಗಳಾದ ಕಲಾವತಿ,  ಚಲುವರಾಜು ಬಿ,. ಪೊಲೀಸ್ ಇನ್ಸ್’ಪೆಕ್ಟರ್ ಅಮಾನುಲ್ಲಾ ಎ ನೇತೃತ್ವದ 3 ತಂಡಗಳನ್ನು ರಚಿಸಿ ದಾಳಿಗೆ ಆದೇಶಿಸಿದ್ದರು.

 ಈ ತಂಡವು ಮುಲ್ಕಿ, ಬೆಳ್ತಂಗಡಿ, ಮತ್ತು ಬಂಟ್ವಾಳ ಮುಂತಾದ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ಸ್ಥಳಗಳಲ್ಲಿ ದಾಳಿ ನಡೆಸಿ ಲಾರಿ, ಟಿಪ್ಪರ್, ಜೆಸಿಬಿ, ಮತ್ತು ಮರಳು ಸೇರಿದಂತೆ ಒಟ್ಟು ಸುಮಾರು 40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಿದ್ದು, ಈ ಬಗ್ಗೆ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಿಸಲಾಗಿದೆ. ಇನ್ನು ಅನೇಕ ಕಡೆಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ಮತ್ತು ನಿಯಮ ಮೀರಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ.

ಅಕ್ರಮ ಮರಳುಗಾರಿಕೆಯಿಂದ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದ್ದು, ಈ ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಲಕ್ಷ್ಮೀಗಣೇಶ್‌ ಕೆ. ಎಚ್ಚರಿಸಿದ್ದಾರೆ.

Join Whatsapp
Exit mobile version