ಮಂಗಳೂರು: ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Prasthutha|

ಮಂಗಳೂರು: ವಿವಾಹಿತ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.

- Advertisement -

ಮಾಡೂರು ನಿವಾಸಿ, ಒಟ್ಟೆಕಾಯ‌ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ (26) ಮೃತಪಟ್ಟವರು ಗುರುತಿಸಲಾಗಿದೆ.

ದಿವ್ಯಾ ತನ್ನ ಪತಿ ಹರೀಶ್ ಜೊತೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಈ ವೇಳೆ ಪತಿ- ಪತ್ನಿ ನಡುವೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ.

- Advertisement -

ಇದರಿಂದ ಬೇಸರಗೊಂಡ ದಿವ್ಯಾ ಜ.22ರಂದು ಸಂಜೆ ಮನೆಯ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದಿವ್ಯಾ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp