ಮಂಗಳೂರು: ಮುಸ್ಲಿಮ್ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Prasthutha|

ಮಂಗಳೂರು: ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ ಸಂದರ್ಭದಲ್ಲೇ, ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮುಸ್ಲಿಮ್ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ಸಂಜೆ ಸುರತ್ಕಲ್ ಬಳಿ ನಡೆದಿದೆ.

- Advertisement -


ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹಲ್ಲೆಗೊಳಗಾದವರು. ತಕ್ಷಣ ಅವರನ್ನು ಸ್ಥಳೀಯ ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸುರತ್ಕಲ್ ಜವಳಿ ಅಂಗಡಿಯ ಮುಂಭಾಗ ಈ ಘಟನೆ ನಡೆದಿದೆ. ಫಾಝಿಲ್ ಅವರು ಅಂಗಡಿಯ ಬಳಿ ನಿಂತುಕೊಂಡಿದ್ದಾಗ ಹುಂಡೈ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Join Whatsapp