ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ SDPI ವತಿಯಿಂದ ನಾಳೆ ‘ಒಲವಿನ ಕರ್ನಾಟಕ’ ಕಾರ್ಯಕ್ರಮ

Prasthutha|

ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ರಾಜ್ಯಾದ್ಯಂತ ನವೆಂಬರ್ ತಿಂಗಳಲ್ಲಿ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷವಾಕ್ಯದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರ ಭಾಗವಾಗಿ ನಾಳೆ ದ.ಕ ಜಿಲ್ಲಾದ್ಯಂತ ‘ಒಲವಿನ ಕರ್ನಾಟಕ’ ಕಾರ್ಯಕ್ರಮ ನಡೆಯಲಿದೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿರುವ SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವೆಂಬರ್ 1 ರಂದು ಬೆಳಿಗ್ಗೆ ಪಕ್ಷದ ಗ್ರಾಮ ಸಮಿತಿ ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಗಳ ವತಿಯಿಂದ ಧ್ವಜಾರೋಹಣ , ಸಿಹಿತಿಂಡಿ ವಿತರಣೆ ಮತ್ತು ರಾಜ್ಯೋತ್ಸವದ ಸಂದೇಶ ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 1 ರಂದು ಸಂಜೆ 6:30 ಕ್ಕೆ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಪುರಭವನದ ಮುಂಭಾಗದಲ್ಲಿ ಸಭಾ ಕಾರ್ಯಕ್ರಮ ಮತ್ತು ಕರಾವಳಿಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಈ ಕಾರ್ಯಕ್ರಮಕ್ಕೆ ಬರಹಗಾರರು, ಪ್ರಾಧ್ಯಾಪಕರು , ಕಲಾವಿದರು, ಪಕ್ಷದ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

- Advertisement -

ಎಲ್ಲಾ ಕನ್ನಡ ಭಾಷಾ ಪ್ರೇಮಿಗಳಿಗೆ ಕಾರ್ಯಕ್ರಮಕ್ಕೆ ಆಮಂತ್ರಣವಿದೆಯೆಂದು ಅಕ್ಬರ್ ತಿಳಿಸಿದರು.

Join Whatsapp