ಮಂಗಳೂರು: ರಸ್ತೆ ಗುಂಡಿ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪೊಲೀಸರು

Prasthutha|

- Advertisement -

ಮಂಗಳೂರು: ಆ್ಯಕ್ಸಿಡೆಂಟ್ ಸ್ಪಾಟ್ ಎಂದು ಕುಖ್ಯಾತಿ ಹೊಂದಿರುವ ನಂತೂರು ಜಂಕ್ಷನ್ ರಸ್ತೆ ಹೊಂಡ ಗುಂಡಿಗಳಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು‌. ಈ ಹಿಂದೆ ಗುಂಡಿಗಳಿಂದಲೇ ಆ್ಯಕ್ಸಿಡೆಂಟ್ ಆಗಿ ಜೀವಗಳು ಬಲಿಯಾಗಿತ್ತು. ಈ ಸಂಭಾವ್ಯ ಅಪಾಯ ಹಾಗೂ ಸಂಚಾರ ಅಡಚಣೆಯನ್ನು ತಪ್ಪಿಸಲು ನಂತೂರಿನ ರಸ್ತೆ ಗುಂಡಿಗಳನ್ನು ಮಂಗಳೂರು ನಗರ ಪೊಲೀಸರು ಮುಚ್ಚಿದ್ದಾರೆ.

ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಈಶ್ವರ ಸ್ವಾಮಿ, ಎಎಸ್‌ ಐ ವಿಶ್ವನಾಥ ರೈ ಅವರು ಹಾರೆ, ಗುದ್ದಲಿ ಹಿಡಿದು ರಸ್ತೆ ಗುಂಡಿಯನ್ನು ಮುಚ್ಚುವ ಕಾರ್ಯವನ್ನು ಮಾಡಿದ್ದಾರೆ. ಈ ಹಿಂದೆ ಒಂದೆರಡು ಬಾರಿ ಈ ರಸ್ತೆ ಗುಂಡಿಗಳಿಗೆ ತೇಪೆ ಹಾಕುವ ಕಾರ್ಯಗಳು ನಡೆದಿತ್ತು. ಆದರೆ ಕೆಲವೇ ದಿನಗಳ ನಂತರ ರಸ್ತೆ ಮತ್ತೆ ಗುಂಡಿ ಮಯವಾಗಿದೆ ಎಂದು ವಾಹನ ಸವಾರರು ಆರೋಪಿಸುತ್ತಿದ್ದಾರೆ. ಇಲ್ಲಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ಸವಾರರು ಜೀವ ಕೈಯಲ್ಲಿ ಹಿಡಿದೇ ಸಂಚರಿಸಬೇಕಾದ ದುಃಸ್ಥಿತಿ ಇದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.



Join Whatsapp
Exit mobile version