ಮಂಗಳೂರು: ನೀರುಪಾಲಾದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

Prasthutha|

ಉಳ್ಳಾಲ: ನಿನ್ನೆ(ಜು.4) ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮೋರಿ ದಾಟುವಾಗ ಮಳೆ ನೀರಿಗೆ ಬಿದ್ದು ಮೃತಪಟ್ಟ ಸುರೇಶ್ ಗಟ್ಟಿ ಕುಟುಂಬಕ್ಕೆ ಜಿಲ್ಲಾಡಳಿತದ ವತಿಯಿಂದ ಜು.5ರ ಬುಧವಾರ 5 ಲಕ್ಷ ರೂ.ಗಳ ಪರಿಹಾರ ಪಾವತಿಸಲಾಗಿದೆ.

- Advertisement -

ಮೃತ ಸುರೇಶ್ ಗಟ್ಟಿ ಅವರ ಪತ್ನಿ ಶಾಂಭ ಅವರಿಗೆ ಸಾಂತ್ವನ ಹೇಳಿದ ತಹಶೀಲ್ದಾರ್ ಪ್ರಭಾಕರ್, 5 ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.


ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52) ತನ್ನ ಮನೆಯ ಹತ್ತಿರದಲ್ಲಿರುವ ಮೋರಿ ದಾಟುವಾಗ ಮಳೆ ನೀರಿಗೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದರು.

- Advertisement -


ವೃತ್ತಿಯಲ್ಲಿ ಪೈಂಟರ್ ಆಗಿರುವ ಅವರು ಕೆಲಸ ಮುಗಿಸಿ ನಿನ್ನೆ ಸಂಜೆ(ಜು.4) ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿತ್ತು.

ಈ ಬಗ್ಗೆ ಉಳ್ಳಾಲ ತಾಲೂಕು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ. ಮೃತರ ವಾರಸುದಾರರಿಗೆ ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಪರಿಹಾರ ವಿತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp