ಮಂಗಳೂರು: ಸಂಘಪರಿವಾರದ ಅನೈತಿಕ ಗೂಂಡಾಗಿರಿ ಖಂಡಿಸಿ ನಾಳೆ SDPI ಪ್ರತಿಭಟನೆ

Prasthutha|

ಮಂಗಳೂರು: ಸಂಘಪರಿವಾರದ ಅನೈತಿಕ ಗೂಂಡಾಗಿರಿ ಖಂಡಿಸಿ ನಾಳೆ ಮಂಗಳೂರಿನ ಕ್ಲಾಕ್ ಟವರ್ ಬಳಿ SDPI ಪ್ರತಿಭಟನೆ ನಡೆಸಲಿದೆ.

- Advertisement -

ದ.ಕ ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ನಡೆಸುತ್ತಿರುವ ಸಂಘಪರಿವಾರದ ಕಿರಾತಕರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಾಳೆ (ಆ.4) ಶುಕ್ರವಾರ ಅಪರಾಹ್ನ 3 :00 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ಸುಹೈಲ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Join Whatsapp