ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅರೆಸ್ಟ್..!

Prasthutha|

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ರಾತ್ರೋರಾತ್ರಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಂಗಳೂರಿನ ಬಜಪೆ ಠಾಣೆ ಪೊಲೀಸರಿಂದ ಸುನೀಲ್ ಬಜಿಲಕೇರಿ ಬಂಧನವಾಗಿದ್ದು, ಫೇಸ್‌ಬುಕ್‌ ನಲ್ಲಿ ಗರ್ಭಿಣಿ ಬಗ್ಗೆ ಅವಹೇಳನಕಾರಿ ಬರಹ ಬರೆದಿದ್ದರು ಎನ್ನಲಾಗಿದೆ.

 ‌’ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಅಂತ ಪೋಸ್ಟ್ ಮಾಡಿ ಗರ್ಭಿಣಿಯ ಫೋಟೋಗೆ ಚೀತಾದ ಮುಖ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದರು. ಗರ್ಭಿಣಿ ಮತ್ತು ಭಾರತೀಯ ಸಂಸ್ಕೃತಿಗೆ ಅವಹೇಳನ ಎಂದು ಎಡಪದವು ಗ್ರಾಮದ ಮಹಿಳೆ ಪೊಲೀಸ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುನೀಲ್ ಬಜಿಲಕೇರಿ ಬಂಧನ ಮಾಡಲಾಗಿದೆ.

- Advertisement -

ಬಿಜೆಪಿ ಮತ್ತು ಸರ್ಕಾರದ ವಿರುದ್ದ ಟೀಕೆ ಮಾಡುತ್ತಿದ್ದ ಸುನೀಲ್ ಬಜಿಲಕೇರಿ, ತನ್ನ ಸಾಮಾಜಿಕ ತಾಣಗಳಲ್ಲಿ ಹಲವು ಬಿಜೆಪಿ ನಾಯಕರ ಬಗ್ಗೆ ಟೀಕೆ ಮಾಡಿದ್ದರು.‌

Join Whatsapp