ರಜೆ ಮೇಲೆ ಹುಟ್ಟೂರಿಗೆ ಬರಬೇಕಿದ್ದ ಮಂಗಳೂರಿನ ಯೋಧ ಹೃದಯಾಘಾತದಿಂದ ಮೃತ್ಯು

Prasthutha|

ಮಂಗಳೂರು: ರಜೆಯ ಮೇಲೆ ಊರಿಗೆ ಬರಬೇಕಾಗಿದ್ದ ಮಂಗಳೂರು ಮೂಲದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.

- Advertisement -

ಮಧ್ಯಪ್ರದೇಶದ ಭೋಪಾಲ್​ನಲ್ಲಿ‌ ಸಶಸ್ತ್ರ ಸೀಮಾ ಬಲ್​ನಲ್ಲಿ ಕರ್ತವ್ಯದಲ್ಲಿದ್ದ ಮುರಳಿಧರ್ ರೈ (37) ಮೃತ ಯೋಧರಾಗಿದ್ದಾರೆ.

ಮಲಗಿದ್ದಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಮುರಳಿಧರ್ ಅವರ ಮೃತದೇಹವನ್ನು ಮಂಗಳೂರಿಗೆ ತರಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಗಿದೆ.

- Advertisement -

ಮಂಗಳೂರು ವಿಮಾನ ನಿಲ್ದಾಣಕ್ಕೆ ಮೃತ ಯೋಧ‌ನ ಮೃತದೇಹ ಆಗಮಿಸಿದಾಗ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಅಧಿಕಾರಿಗಳು ಸಕಲ ಸರ್ಕಾರಿ ಗೌರವ ಸಲ್ಲಿಸಿದರು.

ಬಳಿಕ ಮೃತದೇಹವನ್ನು ಎ.ಜೆ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಯಿತು. ಇಂದು (ಜ.25) ಶಕ್ತಿನಗರದ ಯೋಧನ ಮನೆಯಲ್ಲಿ ಅಂತಿಮ ವಿಧಿ ವಿಧಾನ ನೆರವೇರಲಿದೆ.

2007ರಲ್ಲಿ ಕಾನ್ಸ್‌ಟೇಬಲ್ ಆಗಿ ಸಶಸ್ತ್ರ ಸೀಮಾ ಬಲ್​ಗೆ ಸೇರ್ಪಡೆಯಾಗಿದ್ದ ಮುರಳಿಧರ್ ರೈ, ಹವಾಲ್ದಾರ್ ಆಗಿ ಭೋಪಾಲ್​ನಲ್ಲಿ ಕರ್ತವ್ಯದಲ್ಲಿದ್ದರು. ಅವರು ಪತ್ನಿ ಹಾಗೂ ಆರು ತಿಂಗಳ ಮಗುವನ್ನು‌ ಅಗಲಿದ್ದಾರೆ.

Join Whatsapp