Home ಕರಾವಳಿ ಮಂಗಳೂರು ತಾಲೂಕು ಬಿಲ್ಲವ ಸಂಘ ಅಸ್ತಿತ್ವಕ್ಕೆ

ಮಂಗಳೂರು ತಾಲೂಕು ಬಿಲ್ಲವ ಸಂಘ ಅಸ್ತಿತ್ವಕ್ಕೆ

ಮಂಗಳೂರು: ಮಂಗಳೂರು ತಾಲೂಕು ಬಿಲ್ಲವ ಸಂಘವು ಸ್ಥಾಪನೆಯಾಗಿದ್ದು ಸೆಪ್ಟೆಂಬರ್ 4ನೇ ತಾರೀಕಿನಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೊರಗಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಅಧಿಕೃತವಾಗಿ ಉದ್ಘಾಟನೆ ಆಗಲಿದೆ ಎಂದು ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ ತಿಳಿಸಿದರು.

ಮಾಜಿ ಕೇಂದ್ರ ಮಂತ್ರಿ ಜನಾರ್ದನ ಪೂಜಾರಿ ಮತ್ತು ಮಾಜಿ ಶಾಸಕ ವಸಂತ ಬಂಗೇರ ಅವರು ಉದ್ಘಾಟನೆ ಮಾಡುವರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಂಜನ್ ಮಿಜಾರ್, ಸುರೇಶ್ಚಂದ್ರ ಕೋಟ್ಯಾನ್, ಪಾರ್ವತಿ ಅಮೀನ್, ಲೋಕನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Join Whatsapp
Exit mobile version