Home ಟಾಪ್ ಸುದ್ದಿಗಳು ಮಂಗಳೂರು: ಯುವಕನಿಗೆ ಚೂರಿ ಇರಿತ

ಮಂಗಳೂರು: ಯುವಕನಿಗೆ ಚೂರಿ ಇರಿತ

ಮಂಗಳೂರು: ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ.


ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ. ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Join Whatsapp
Exit mobile version