ಮಂಗಳೂರು|ಸೇತುವೆ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿದ ಯುವಕ

Prasthutha|

ಮಂಗಳೂರು: ಸೇತುವೆಯ ಮೇಲೆ‌‌ ದ್ವಿಚಕ್ರ ವಾಹನ ನಿಲ್ಲಿಸಿ ಯುವಕನೋರ್ವ ನದಿಗೆ ಹಾರಿದ ಘಟನೆ ಗುರುಪುರದಲ್ಲಿ ನಡೆದಿದೆ.

- Advertisement -


ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ನದಿಗೆ ಹಾರಿದ ವ್ಯಕ್ತಿ. ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ನಿನ್ನೆ ಸಾಯಂಕಾಲ 7 ಗಂಟೆಯ ಸುಮಾರಿಗೆ ಗುರುಪುರ ಸೇತುವೆಯ ಬಳಿ ಬಂದು ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾತ್ರಿಯಾದ್ದರಿಂದ ಬೆಳಿಗ್ಗೆ ಕಾರ್ಯಾಚರಣೆಯನ್ನು ನಡೆಸಲಾಗಿದೆ.

Join Whatsapp
Exit mobile version