ಮಂಗಳೂರು: ಚಿನ್ನದ ಅಂಗಡಿಯಲ್ಲಿ ಸಿಬ್ಬಂದಿ ಕೊಲೆ ಪ್ರಕರಣ| ಆರೋಪಿ ಬಂಧನ​

Prasthutha|

ಮಂಗಳೂರು: ಚಿನ್ನದ ಅಂಗಡಿಯ ಸಿಬ್ಬಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೇರಳದ ಕಾಸರಗೋಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಕೇರಳದ ಕಲ್ಲಿಕೋಟೆಯ ನಿವಾಸಿ ಶಿಫಾಸ್(33) ಬಂಧಿತ ಆರೋಪಿ.

ಕಾಸರಗೋಡು ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡ ಕಾಸರಗೋಡಿನ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆರೋಪಿ ಶಿಫಾಸ್‌ನನ್ನು ಮಂಗಳೂರು ಪೊಲೀಸರಿಗೆ ಒಪ್ಪಿಸಲಿದ್ದಾರೆ.

- Advertisement -

ಫೆ.3ರಂದು ಮಂಗಳೂರಿನ ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಎಂಬ ಹೆಸರಿನ ಅಂಗಡಿಯಲ್ಲಿ ಜ್ಯುವೆಲ್ಲರಿ ಸಿಬ್ಬಂದಿಯಾದ ಅತ್ತಾವರ ನಿವಾಸಿ ರಾಘವೇಂದ್ರ(50) ಅವರನ್ನು ಹತ್ಯೆ ಮಾಡಲಾಗಿತ್ತು.

ಜ್ಯುವೆಲ್ಲರಿ ಮಾಲೀಕ ಕೇಶವ ಆಚಾರ್ಯ ‌ಮಧ್ಯಾಹ್ನ ಊಟಕ್ಕೆ ತೆರಳಿದ್ದ ವೇಳೆ ಕೊಲೆ ನಡೆದಿತ್ತು. ಬಂದರು ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು.

Join Whatsapp