ಮಣಿಪುರದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ: 3 ಜಿಲ್ಲೆಗಳಲ್ಲಿ ಕರ್ಫ್ಯೂ

Prasthutha|

ಇಂಫಾಲ್: ರಾಜ್ಯದಲ್ಲಿ ಇತ್ತೀಚಿಗೆ ನಡೆದ ಡ್ರೋನ್ ದಾಳಿಯನ್ನು ಖಂಡಿಸಿ ಮಂಗಳವಾರವೂ ವಿದ್ಯಾರ್ಥಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈತೇಯಿ ಸಮುದಾಯದ ಪ್ರಾಬಲ್ಯವಿರುವ ತೌಬಲ್, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಮಣಿಪುರ ಸರ್ಕಾರ ಆದೇಶ ಹೊರಡಿಸಿದೆ.

- Advertisement -


ಇಂಫಾಲ್ ವೆಸ್ಟ್ ಆಡಳಿತವು ಮುಂದಿನ ಆದೇಶದವರೆಗೆ “ಯಾವುದೇ ವ್ಯಕ್ತಿ(ಗಳ) ತಮ್ಮ ನಿವಾಸಗಳ ಹೊರಗೆ ಸಂಚರಿಸುವುದನ್ನು” ನಿರ್ಬಂಧಿಸಿದೆ. ಅಗತ್ಯ ಸೇವೆಗಳು, ಮಾಧ್ಯಮಗಳಿಗೆ ವಿನಾಯಿತಿ ನೀಡಿದೆ.


ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರದ ವಿವಿಧ ಘಟನೆಗಳಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳು ಕಣಿವೆ ಪ್ರದೇಶಗಳಲ್ಲಿ, ವಿಶೇಷವಾಗಿ ತೌಬಾಲ್ ಮತ್ತು ಇಂಫಾಲಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸಿದರು.

- Advertisement -


ತೌಬಲ್ ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದ ನಂತರ ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.



Join Whatsapp