ಮಂಜನಾಡಿ| ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿದ ಕಳ್ಳರು

Prasthutha|

- Advertisement -

ಉಳ್ಳಾಲ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜನಾಡಿ ಗ್ರಾಮದ ಶ್ರೀ ವಿಷ್ಣು ಮೂರ್ತಿ ಜನಾರ್ಧನ ದೇವಸ್ಥಾನಕ್ಕೆ ಕನ್ನ ಹಾಕಿರುವ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ 2,000 ನಗದು ಹಣವನ್ನು ದೋಚಿದ್ದಾರೆ.

ದೇವಸ್ಥಾನದ ಉತ್ತರ ಭಾಗದ ಬಾಗಿಲು ಮುರಿದು ಪ್ರವೇಶಿದ್ದ ಕಳ್ಳರು, ಗರ್ಭಗುಡಿಯ ಎದುರು ಇಟ್ಟಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿದು ನಗದು ಹಣವನ್ನು ಕಳವು ಮಾಡಿದ್ದಾರೆ. ಬೆಳಗ್ಗಿನ ಜಾವ ದೇವಸ್ಥಾನದ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

- Advertisement -

ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿದ್ದಾರೆ.

Join Whatsapp