Home ಟಾಪ್ ಸುದ್ದಿಗಳು ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ರೈಲ್ವೆ ವಿಭಾಗ ಮಾಡಿ: ಸೋಮಣ್ಣಗೆ ಮನವಿ ಸಲ್ಲಿಸಿದ ಮಂಜುನಾಥ ಭಂಡಾರಿ

ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ರೈಲ್ವೆ ವಿಭಾಗ ಮಾಡಿ: ಸೋಮಣ್ಣಗೆ ಮನವಿ ಸಲ್ಲಿಸಿದ ಮಂಜುನಾಥ ಭಂಡಾರಿ

ಮಂಗಳೂರು: ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ರೈಲ್ವೆ ವಿಭಾಗ ಮಾಡಬೇಕೆಂದು ಆಗ್ರಹಿಸಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ಎಂಎಲ್ ಸಿ ಮಂಜುನಾಥ ಭಂಡಾರಿ ಮನವಿ ಸಲ್ಲಿಸಿದ್ದಾರೆ.


ಮನವಿ ಪತ್ರದಲ್ಲಿ…
ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗವು ತೋಕೂರುವರೆಗೆ, ನೈರುತ್ಯ ರೈಲ್ವೇಯ ಮೈಸೂರು ವಿಭಾಗವು ಮೈಸೂರಿನಿಂದ ಹಾಸನ ಮಾರ್ಗವಾಗಿ ಮಂಗಳೂರು ಜಂಕ್ಷಣ್ ವರೆಗೆ ಹಾಗೂ ರೋಹದಿಂದ ತೋಕೂರುವರೆಗೆ ಕೊಂಕಣ ರೈಲ್ವೆ ನಿಗಮಕ್ಕೆ ಸಂಬಂಧಪಟ್ಟಿರುತ್ತದೆ. ಪಾಲ್ಘಾಟ್, ಮೈಸೂರು ಮತ್ತು ಕೊಂಕಣ ರೈಲ್ವೆಗೆ ಮಂಗಳೂರು ಸಂಪರ್ಕ ಕೊಂಡಿಯಾಗಿರುತ್ತದೆ.


. ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನ ಮಾಡಿ.

ಕರ್ನಾಟಕ ಕರಾವಳಿ ಭಾಗದ ರೈಲ್ವೇ ಪ್ರದೇಶಕ್ಕೆ ಪ್ರತ್ಯೇಕ ಮಂಗಳೂರು ವಿಭಾಗವನ್ನು ಸೃಜಿಸಬೇಕು.
. ಕೊಂಕಣ ರೈಲ್ವೆ ನಿಗಮವು 5000 ಕೋಟಿ ರೂಪಾಯಿ ನಷ್ಟದಲ್ಲಿದೆ. ಜೋಡಿ ಹಳಿ ನಿರ್ಮಾಣಕ್ಕೆ ನಿಗಮದ ಬಳಿ ಹಣವಿಲ್ಲ. ಹೆಚ್ಚುವರಿ ಬೋಗಿಗಳ ಹಾಗು ಹೊಸ ಜರ್ಮನ್ ತಂತ್ರಜ್ಞಾನದ ಎಲ್ ಎಚ್ ಬಿ ರೈಲು ಬೋಗಿಗಳ ಖರೀದಿಗೂ ನಿಗಮದ ಬಳಿ ಹಣವಿಲ್ಲ. ಕೊಂಕಣ ರೈಲ್ವೆ ನಿಗಮದ ವ್ಯಾಪ್ತಿಯಲ್ಲಿ ರೈಲು ಟಿಟೆಟ್ ದರ ಉಳಿದ ಕಡೆಗಳಿಗಿಂತ 140ರಷ್ಟು ಜಾಸ್ತಿಯಿದೆ.

  • ಕೊಂಕಣ ರೈಲ್ವೆ ನಿಗಮದ ತೋಕೂರಿನಿಂದ ರೋಹವರೆಗೆ ಹಾಗೂ ನೈರುತ್ಯ ರೈಲ್ವೇಯ ಮೈಸೂರು ವಿಭಾಗದ ಮೈಸೂರಿನಿಂದ ಹಾಸನ ಮಾರ್ಗವಾಗಿ ಮಂಗಳೂರು ಜಂಕ್ಷಣ್ ವರೆಗೆ ಏಕ ಮಾರ್ಗವಾಗಿದ್ದು ಇದು ದ್ವಿಪಥವಾಗಿ ಹಾಗೂ ವಿದ್ಯದ್ದೀಕರಣವಾಗಬೇಕು.
  • ರೈಲ್ವೆ ನಿಲ್ದಾಣಗಳ ಆಧುನೀಕರಣ ಹಾಗೂ ಎಲಿವೇಟರ್ ಗಳ ವ್ಯವಸ್ಥೆಯನ್ನು ಒದಗಿದಬೇಕು. ಆದ್ದರಿಂದ ಈ ಮೇಲೆ ಹೇಳಿದ ರೈಲ್ವೇ ಅಭಿವೃದ್ಧಿಯ ನಿಟ್ಟಿನಲ್ಲಿ ಮಂಗಳೂರು ವಿಭಾಗವನ್ನು ಸೃಜಿಸಿ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದ್ದಾರೆ.
Join Whatsapp
Exit mobile version