Home ಟಾಪ್ ಸುದ್ದಿಗಳು ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯ ಹತ್ಯೆ: ಆರೋಪಿಗಳ ಬಂಧನ

ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯ ಹತ್ಯೆ: ಆರೋಪಿಗಳ ಬಂಧನ

ಚಿತ್ರದುರ್ಗ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊರಪೇಟೆ ಎಂಬಲ್ಲಿ ನಡೆದಿದೆ.

ಮುಹಮ್ಮದ್ ಅಝರ್(28) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಚಿತ್ರದುರ್ಗದ ಹೊರಪೇಟೆ ಬಡಾವಣೆಯ ನಿವಾಸಿಯಾಗಿದ್ದಾರೆ.

ಮುಬಾರಕ್, ಬಾಬು, ಪ್ರದೀಪ್ ಅವರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹಣದ ವ್ಯವಹಾರ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ. ಈ ಕುರಿತು ಚಿತ್ರದುರ್ಗ ನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version