ಮರಾಠ ಮುಖಂಡ ವಿನಾಯಕ್ ಮೇಟೆ ಕಾರು ಅಪಘಾತಕ್ಕೆ ಬಲಿ

Prasthutha|

ಮಹಾರಾಷ್ಟ್ರ: ಇಂದು ಬೆಳಗ್ಗೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದ ಅಪಘಾತದಲ್ಲಿ ಮರಾಠ ಸಮುದಾಯದ ಮುಖಂಡ, ಮಾಜಿ ಎಂಎಲ್‌ ಸಿ ವಿನಾಯಕ್ ಮೇಟೆ ಸಾವನ್ನಪ್ಪಿದ್ದಾರೆ.

- Advertisement -

ಎಕ್ಸ್‌ ಪ್ರೆಸ್‌ ವೇಯ ಮಡಪ್ ಸುರಂಗದ ಬಳಿ ಮತ್ತೊಂದು ವಾಹನ ಇವರು ಸಂಚರಿಸುತ್ತಿದ್ದ ವಾಹನಕ್ಕೆ ಢಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ವಿನಾಯಕ ಮೇಟೆ ಸಂಚರಿಸುತ್ತಿದ್ದ ಕಾರು ನಜ್ಜುಗುಜ್ಜಾಗಿದೆ. ಅಲ್ಲದೇ ಕಾರಿನಲ್ಲಿದ್ದ ಇತರರೂ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ವಿಧಾನ ಪರಿಷತ್‌ ನ ಮಾಜಿ  ಸದಸ್ಯರಾಗಿರುವ ಮೇಟೆ ಅವರು ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

- Advertisement -

ಮೇಟೆ ಅವರ ನಿಧನಕ್ಕೆ ರಾಜ್ಯದ ಹಲವಾರು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

Join Whatsapp