Home ಟಾಪ್ ಸುದ್ದಿಗಳು ಕೊಲೆ ಆರೋಪಿಯ ಮದುವೆಗೆ ಭೇಟಿ: DYSP, ಸಿಪಿಐ, PSI ಗಳಿಗೆ ಕಡ್ಡಾಯ ರಜೆ ಶಿಕ್ಷೆ

ಕೊಲೆ ಆರೋಪಿಯ ಮದುವೆಗೆ ಭೇಟಿ: DYSP, ಸಿಪಿಐ, PSI ಗಳಿಗೆ ಕಡ್ಡಾಯ ರಜೆ ಶಿಕ್ಷೆ

ಗಂಗಾವತಿ: ಕೊಲೆ ಆರೋಪದ ಹಿನ್ನೆಲೆ ಹೊಂದಿದ್ದ ರಾಜಕೀಯ ವ್ಯಕ್ತಿಯ ಮದುವೆ ಸಮಾರಂಭಕ್ಕೆ ಹಾಜರಾಗಿದ್ದ ಮೂವರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ.

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಹನುಮೇಶ ನಾಯಕ ಅವರ ಪುತ್ರ ಆನಂದ್ ಎಂಬಾತನ ವಿವಾಹ ಸಮಾರಂಭಕ್ಕೆ ಈ ಅಧಿಕಾರಿಗಳು ಸಮವಸ್ತ್ರ ಸಮೇತ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ.

ಗಂಗಾವತಿ ಡಿ ವೈ ಎಸ್ ಪಿ ರುದ್ರೇಶ್ ಉಜ್ಜನಕೊಪ್ಪ, ಗಂಗಾವತಿ ಗ್ರಾಮೀಣ ಸಿಪಿಐ ಉದಯರವಿ ಹಾಗೂ ಕನಕಗಿರಿ ಪಿ ಎಸ್ ಐ ತಾರಾಬಾಯಿ ಇವರಿಗೆ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಡಿಜೆ ಮತ್ತು ಐಜಿ ಪ್ರವೀಣ್ ಸೂದ್, ಐಜಿ ಮನೀಷ್ ಕರವೇಕರ ನಿರ್ದೇಶನದ ಮೆರೆಗೆ ಎಸ್ ಪಿ ಟಿ.ಶ್ರೀಧರ ಸೂಚನೆ ನೀಡಿದ್ದಾರೆ.

ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದಲ್ಲಿ ಹನುಮೇಶ ನಾಯಕ ಮತ್ತು ಬೆಂಬಲಿಗರ ಕೈವಾಡ ಇರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇನ್ನು ಈ ಪ್ರಕರಣ ನ್ಯಾಯಾಲಯದ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಮದುವೆ ಸಮಾರಂಭಕ್ಕೆ ಭೇಟಿ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.

Join Whatsapp
Exit mobile version