Home ಟಾಪ್ ಸುದ್ದಿಗಳು ಅಪ್ರಾಪ್ತ ಬಾಲಕನೊಂದಿಗೆ ವಿವಾಹಿತೆ ಪರಾರಿ; ಸುಳಿವು ನೀಡುವವರಿಗೆ ಸೂಕ್ತ ಬಹುಮಾನ

ಅಪ್ರಾಪ್ತ ಬಾಲಕನೊಂದಿಗೆ ವಿವಾಹಿತೆ ಪರಾರಿ; ಸುಳಿವು ನೀಡುವವರಿಗೆ ಸೂಕ್ತ ಬಹುಮಾನ

ಅಮರಾವತಿ: ವಿವಾಹಿತೆಯೊಬ್ಬಳು ಅಪ್ರಾಪ್ತ ಬಾಲಕನೊಂದಿಗೆ ಪರಾರಿಯಾದ ಘಟನೆ ಆಂಧ್ರಪ್ರದೇಶದ ಗುಡಿವಾಡ ಪಟ್ಟಣದಲ್ಲಿ ನಡೆದಿದೆ.

ಇತ್ತೀಚೆಗೆ ಗುಡ್‌ಮೆನ್ ಪೇಟ ಎಂಬ ಕಾಲೋನಿಯಿಂದ 15 ವರ್ಷದ ಬಾಲಕ ನಾಪತ್ತೆಯಾಗಿದ್ದ. ಪೋಷಕರು ಎಲ್ಲೆಂದರಲ್ಲಿ ಹುಡುಕಾಡಿದರು  ಬಾಲಕ ಪತ್ತೆಯಾಗಲಿಲ್ಲ. ಆದರೆ ಕುತೂಹಲಕಾರಿ ವಿಚಾರವೆಂದರೆ ಬಾಲಕನ ಮನೆಯ ಎದುರು ವಾಸವಿದ್ದ 29 ವರ್ಷದ ವಿವಾಹಿತ ಯುವ ಮಹಿಳೆ ಕೂಡ ನಾಪತ್ತೆಯಾಗಿದ್ದಳು.  ಇದರಿಂದ ಗಲಿಬಿಲಿಗೊಂಡ ಬಾಲಕನ ಪೋಷಕರು ಆಕೆ ತಮ್ಮ ಹುಡುಗನನ್ನು ಕಿಡ್ನಾಪ್ ಮಾಡಿದ್ದಾಳೆ ಎಂದು ತೀರ್ಮಾನಿಸಿ  ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕುಟುಂಬಸ್ಥರ ದೂರಿನ ಮೇರೆಗೆ ಅಪಹರಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಹಣಕ್ಕಾಗಿ ಬಾಲಕನನ್ನು ಅಪಹರಿಸಲಾಗಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಗಂಡ ಮತ್ತು ಇಬ್ಬರು ಮಕ್ಕಳಿರುವ ವಿವಾಹಿತ ಮಹಿಳೆ ಹುಡುಗನನ್ನು ಅಪಹರಿಸಿರುವ  ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರಕರಣದ ನಿಗೂಢತೆಯನ್ನು ಭೇದಿಸಲು ಯತ್ನಿಸುತ್ತಿದ್ದಾರೆ. ಮದುವೆ ನೆಪದಲ್ಲಿ ಬಾಲಕನನ್ನು ಕರೆದುಕೊಂಡು ಹೋಗಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಟು ಟೌನ್ ಸಿ ಐ ದುರ್ಗಾರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾಲಕನ ಬಗ್ಗೆ ಸುಳಿವು ನೀಡುವವರಿಗೆ ಬಾಲಕನ ಪೋಷಕರು ಸೂಕ್ತ ಬಹುಮಾನ ಘೋಷಿಸಿದ್ದಾರೆ.

Join Whatsapp
Exit mobile version