ಮುಸ್ಲಿಂ ವಿರೋಧಿ ಹಿಂಸಾಚಾರ ಖಂಡಿಸಿ ಕೈಕಂಬದಲ್ಲಿ ಬೃಹತ್ ಪ್ರತಿಭಟನೆ

Prasthutha|

ಮಂಗಳೂರು: ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ವತಿಯಿಂದ ಶುಕ್ರವಾರ ಕೈಕಂಬ ಜಂಕ್ಷನಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಸಲೀಂ ಕುಂಪನಮಜಲು ಮಾತನಾಡಿ, ಆರ್ ಎಸ್ ಎಸ್ ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಕನಸು ಕಾಣುತ್ತಿದೆ. ಈ ಕನಸು ಪಾಪ್ಯುಲರ್ ಫ್ರಂಟ್ ಇರುವವರೆಗೂ ನನಸಾಗಲು ಸಾಧ್ಯವಿಲ್ಲ ಎಂದರು.

- Advertisement -


ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಸಮಿತಿ ಸದಸ್ಯ ಜಾಫರ್ ಸಾದಿಕ್ ಫೈಝಿ ಮಾತನಾಡಿ, ಆರ್ ಎಸ್ ಎಸ್ ಈ ದೇಶದಲ್ಲಿ ಸಂವಿಧಾನ ವಿರೋಧಿಯಾದ ಕಾನೂನನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ ಎಂದರು.


ವಿಟ್ಲ ತಾಲೂಕು ಸಮಿತಿ ಸದಸ್ಯ ಸಿದ್ದೀಕ್ ಪನಾಮ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸಂಘಪರಿವಾರದ ವಿರುದ್ಧ ಘೋಷಣೆ ಕೂಗಲಾಯಿತು. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Join Whatsapp