Home ಕರಾವಳಿ ಇಂದು ಮಂಗಳೂರಿನಲ್ಲಿ SDPIಯಿಂದ ಬೃಹತ್ ಪ್ರತಿಭಟನೆ

ಇಂದು ಮಂಗಳೂರಿನಲ್ಲಿ SDPIಯಿಂದ ಬೃಹತ್ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೊಲೆ, ಹಲ್ಲೆ, ಅನೈತಿಕ ಪೊಲೀಸ್ ಗಿರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶುಕ್ರವಾರ (ಇಂದು) ಮಧ್ಯಾಹ್ನ 3 ಗಂಟೆಗೆ ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಂಡಿದೆ.


ಈ ಪ್ರತಿಭಟನೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ದಲಿತ ಸಂಘಟನೆಗಳ ಮುಖಂಡರಾದ ಬಿ. ಆರ್. ಭಾಸ್ಕರ್ ಪ್ರಸಾದ್ ಹಾಗೂ ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ ಡಿಪಿಐ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp
Exit mobile version