ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿರಬಹುದು: ಈಶ್ವರಪ್ಪ

Prasthutha|

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಷಡ್ಯಂತ್ರ ಮಾಡಿರಬಹುದು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

- Advertisement -


ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಪ್ರತಿಕ್ರಿಯೆ ನೀಡಿದ ಕೆಎಸ್ ಈಶ್ವರಪ್ಪ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದರ ಹಿಂದೆ ಷಡ್ಯಂತ್ರ ಇದೆ. ಅವರನ್ನು ರಾಜಕೀಯವಾಗಿ ದೂಷಿಸಲು ಈ ತರ ಆಗಿರಬಹುದು. ಆದರೆ ದೂರು ನೀಡಿರುವವರ ಹಿನ್ನೆಲೆಯೂ ಕೂಡ ಸರಿ ಇಲ್ಲ ಎಂದು ತಿಳಿದುಬಂದಿದೆ. ದೂರು ನೀಡುವ ವ್ಯಕ್ತಿ ಈ ಹಿಂದೆಯೂ ಸಾಕಷ್ಟು ಜನರ ವಿರುದ್ಧ ದೂರು ನೀಡಿದ್ದಾರೆ ಎಂದರು.


ಯಡಿಯೂರಪ್ಪ ಅವರನ್ನು ವೈಯಕ್ತಿಕವಾಗಿ ನಾನು ಹತ್ತಿರದಿಂದ ಬಲ್ಲೆ. ಅವರು ಈ ಆರೋಪದಿಂದ ಮುಕ್ತರಾಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ ಕೆಎಸ್ ಈಶ್ವರಪ್ಪ, 40 ವರ್ಷಗಳಿಂದ ಯಡಿಯೂರಪ್ಪನವರನ್ನ ನಾನು ನೋಡುತ್ತಿದ್ದೇನೆ. ಅವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದರು.

Join Whatsapp