Home ಟಾಪ್ ಸುದ್ದಿಗಳು ಬೆಂಗಳೂರಿನಲ್ಲಿ ಜ.30ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ!

ಬೆಂಗಳೂರಿನಲ್ಲಿ ಜ.30ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ!

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಜ.30ರಂದು ಸರ್ವೋದಯ ದಿನದ ಪ್ರಯುಕ್ತ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಜ.30ರ ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನವನ್ನು ʻಸರ್ವೋದಯ ದಿನʼವನ್ನಾಗಿ ಆಚರಿಸಲಾಗುವುದು. ಗಾಂಧೀಜಿಯವರು ಶಾಂತಿ ಪ್ರಿಯರು, ಅಹಿಂಸಾವಾದಿಗಳು. ಈ ಹಿನ್ನೆಲೆಯಲ್ಲಿ ಅಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

Join Whatsapp
Exit mobile version