ಮಾಧ್ಯಮಗಳು ಯಾವುದೇ ವ್ಯಕ್ತಿಯ ತೇಜೋವಧೆ ಮಾಡಬಾರದು: ವಿಶ್ವೇಶ್ವರ ಹೆಗಡೆ ಕಾಗೇರಿ

Prasthutha|

ಬೆಂಗಳೂರು: ಪ್ರಶ್ನಾರ್ಥಕ ಚಿಹ್ನೆ, ಉನ್ನತ ಮೂಲಗಳ ಮಾಹಿತಿ ಆಧಾರದಲ್ಲಿ ಮಾಧ್ಯಮಗಳು ಯಾವುದೇ ವ್ಯಕ್ತಿಯ ತೇಜೋವಧೆ ಮಾಡಬಾರದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

- Advertisement -

ವಿಧಾನವೇಳೆಯಲ್ಲಿ ಶೂನ್ಯವೇಳೆ ಸಂದರ್ಭದಲ್ಲಿ ಗೂಳಿಹಟ್ಟಿ ಶೇಖರ್‌ ಅವರು ವಿಷಯ ಮಂಡಿಸಿ, ಪತ್ರಿಕೆ ಮತ್ತು ಟಿವಿಯಲ್ಲಿ ತಾವು “ಆಪರೇಷನ್‌ ಹಸ್ತ’ದಡಿ ಪಕ್ಷ ತೊರೆಯುವುದಾಗಿ ಸುದ್ದಿಯಾಗಿದೆ.

ಟಿ.ವಿ.ಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ನಾನು ಸದನದಲ್ಲಿದ್ದೆ, ಸಂಜೆ ಹೊತ್ತಿಗೆ ಕ್ಷೇತ್ರದ ಮತದಾರರು ನನ್ನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ನನ್ನ ಹಕ್ಕುಚ್ಯುತಿ ಆಗಿದೆ. ಒಂದಲ್ಲ ಒಂದು ರೀತಿಯಲ್ಲಿ ಮುಜುಗರವಾಗುತ್ತದೆ. ನಾನು ಪಕ್ಷ ಬಿಡುವ ಮಾತು ಆಡಿಲ್ಲ, ಆದರೂ ತೇಜೋವಧೆ ಮಾಡಲಾಗುತ್ತಿದೆ ಎಂದರು.

- Advertisement -

ಆಗ, ಕಾನೂನು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಗೂಳಿಹಟ್ಟಿ ಶೇಖರ್‌ ಪಕ್ಷ ಬಿಡುವುದಿಲ್ಲ ಎಂದಿದ್ದಾರೆ. ಹಾಗಾಗಿ ಸಮಸ್ಯೆ ಮುಗಿದಿದೆ. ಆದರೆ, ಶಾಸಕರು ಮತ್ತು ಜನಪ್ರತಿನಿಧಿಗಳ ತೇಜೋವಧೆ ಮಾಡಬಾರದು ಎಂದು ಹೇಳಿದ್ದಾರೆ.

Join Whatsapp