ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಿಂದುತ್ವವಾದಿಗಳಿಂದ ದಾಳಿ| ಮೆಹಬೂಬಾ ಮುಫ್ತಿ ಖಂಡನೆ

Prasthutha|

►ಮೆಹಬೂಬಾ ಅವರದ್ದು ‘ತಾಲಿಬಾನ್ ಮನಸ್ಥಿತಿ’ ಎಂದ ಬಿಜೆಪಿ ನಾಯಕ

- Advertisement -

ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ಪಂದ್ಯದಲ್ಲಿ ಭಾರತ ಸೋಲನುಭವಿಸಿದೆ ಎಂದು ಹಿಂದುತ್ವವಾದಿಗಳು ಕಾಶ್ಮೀರಿ ವಿದ್ಯಾರ್ಥಿಗಳನ್ನು ಥಳಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ತೀವ್ರವಾಗಿ ಖಂಡಿಸಿದ್ದಾರೆ.

ವಿಧ್ಯಾರ್ಥಿಗಳ ಮೇಲಿನ ದಾಳಿಯನ್ನು ಖಂಡಿಸಿರುವ ಮೆಹಬೂಬಾ ಮುಫ್ತಿಯವರದ್ದು “ತಾಲಿಬಾನ್ ಮನಸ್ಥಿತಿ” ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಹೇಳಿದ್ದಾರೆ. ಮೆಹಬೂಬಾ ಮುಫ್ತಿ ಪಾಕಿಸ್ತಾನಕ್ಕೆ ಬೆಂಬಲ ನೀಡಿ ಘೋರ ಪಾಪ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

- Advertisement -

ಭಾರತ-ಪಾಕಿಸ್ತಾನ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಿಂದುತ್ವಾದಿಗಳು ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದರು.

Join Whatsapp