Home ಟಾಪ್ ಸುದ್ದಿಗಳು ವಿಜಯಪುರ | ಟಾಂಗಾ ಮೂಲಕ ಸಭೆಗೆ ಆಗಮಿಸಿದ ಮೇಯರ್ ಮೆಹಜಬೀನ್ ಹೊರ್ತಿ: ಕಾಂಗ್ರೆಸ್ ಸರ್ಕಾರದ ವಿರುದ್ಧ...

ವಿಜಯಪುರ | ಟಾಂಗಾ ಮೂಲಕ ಸಭೆಗೆ ಆಗಮಿಸಿದ ಮೇಯರ್ ಮೆಹಜಬೀನ್ ಹೊರ್ತಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ

ವಿಜಯಪುರ: ವಾಹನ ಚಾಲಕ ನೇಮಕ ಮಾಡದ ಕಾರಣ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮೆಹಜಬೀನ್ ಹೊರ್ತಿ ಅವರು ಟಾಂಗಾ ಸವಾರಿ ಮೂಲಕ ಸಭೆಗೆ ಆಗಮಿಸಿದರು.


ಈ ಬಗ್ಗೆ ಮಾತನಾಡಿದ ಮೇಯರ್ ಮೆಹಜಬೀನ್ ಹೊರ್ತಿ, ಪಾಲಿಕೆಯಿಂದ ಹಳೆಯ ವಾಹನ ನೀಡಲಾಗಿದೆ. ಚಾಲಕನನ್ನೂ ನೀಡಿಲ್ಲ. ಹಳೆಯ ವಾಹನದಲ್ಲಿ ಓಡಾಡಲು ಆಗುತ್ತಿಲ್ಲ. ಚಾಲಕನೂ ಇಲ್ಲದೇ ಹೇಗೆ ಉಪಯೋಗಿಸಬೇಕು ಎಂದು ಪ್ರಶ್ನೆ ಮಾಡಿದ್ದಾರೆ.


ನಮ್ಮದೇ ಸರ್ಕಾರವಿದ್ದರೂ ಪಾಲಿಕೆ ಮೇಯರ್ ರನ್ನು ಉದಾಸೀನ ಮಾಡಲಾಗುತ್ತಿದೆ. ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತಂದರೂ ಸ್ಪಂಧಿಸಿಲ್ಲ ಎಂದು ಮೇಯರ್ ಮೆಹಜಬೀನ್ ಹೊರ್ತಿ ಆರೋಪ ಮಾಡಿದ್ದಾರೆ.

Join Whatsapp
Exit mobile version