ಟಿಕೆಟ್​ನಲ್ಲಿ ಕ್ರಿಸ್​ಮಸ್​ ಶುಭಾಶಯ: KSRTC ಸ್ಪಷ್ಟನೆ

Prasthutha|

ಬೆಂಗಳೂರು: ಬಸ್​ ಟಿಕೆಟ್​ನಲ್ಲಿ ಕ್ರಿಸ್​ಮಸ್​ ಹಬ್ಬದ ಶುಭಾಶಯ ಮುದ್ರಿಸಿರುವ ಬಗ್ಗೆ KSRTC ಸ್ಪಷ್ಟನೆ ನೀಡಿದ್ದು, ಅಚಾತುರ್ಯದಿಂದ ಹಾಗಾಗಿತ್ತು, ಮುದ್ರಿತ ಸಂದೇಶ ತೆಗೆದು ಹಾಕಲಾಗಿದೆ ಎಂದು ಹೇಳಿದೆ.

- Advertisement -

ಟಿಕೆಟ್​ನಲ್ಲಿ ಕ್ರಿಸ್​ಮಸ್​ ಹಬ್ಬದ ಶುಭಾಶಯ ತಿಳಿಸುವ ಸಂದೇಶ ಪ್ರಿಂಟ್​ ಆಗಿರುವ ಬಗ್ಗೆ ಕೆಎಸ್​ಆರ್​ಟಿಸಿ ವಿರೋಧ ವ್ಯಕ್ತವಾಗಿತ್ತು. ಹಿಂದು ಧರ್ಮದ ಹಬ್ಬಗಳಿಗೆ ಈವರೆಗೆ ಯಾಕೆ ಶುಭಾಶಯ ಸಂದೇಶ ಟಿಕೆಟ್​ನಲ್ಲಿ ಮುದ್ರಿಸಿಲ್ಲ ಎಂದು ಪ್ರಶ್ನಿಸಲಾಗಿತ್ತು.

ಕೆಎಸ್​ಆರ್​ಟಿಸಿ ನಿಗಮದ ಒಟ್ಟು 83 ಟಕಗಳಲ್ಲಿ 16 ವಿಭಾಗಗಳಿದ್ದು, ನಿತ್ಯ 10,200 ಇಟಿಎಂ(ಇಲೆಕ್ಟ್ರಿಕ್​ ಟಿಕೆಟ್​ ಮೆಶಿನ್​)ಗಳಲ್ಲಿ ಮುದ್ರಿತ ಮಾಹಿತಿಯನ್ನು ಅಪ್ಲೋಡ್​ ಮಾಡಲಾಗುತ್ತದೆ. ಟಿಕೆಟ್​ ವಿತರಣಾ ಯಂತ್ರಗಳ ಮೂಲಕ ಹಬ್ಬ ಹರಿದಿನಗಳು, ರಾಷ್ಟ್ರೀಯ ಹಬ್ಬ ಹಾಗೂ ಇತರ ರಜಾ ದಿನಗಳ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಬಹುದಾಗಿದೆ. ಈ ವ್ಯವಸ್ಥೆಯನ್ನು ಟಕಗಳಲ್ಲಿ ಆಂತರಿಕ ಬಳಕೆಗಾಗಿ ಮಾತ್ರ ಕಲ್ಪಿಸಲಾಗಿದೆ. ಟಿಕೆಟ್​ನಲ್ಲಿ ದಾಖಲಾಗಿರುವ ಕ್ರಿಸ್​ಮಸ್​ ಹಬ್ಬದ ಸಂದೇಶ ಡಿ.25ರಂದು ಮಾತ್ರ ಮುದ್ರಿತವಾಗಿದೆ. ಇದು ಚಿಕ್ಕಬಳ್ಳಾಪುರ ವಿಭಾಗದ, ಚಿಕ್ಕಬಳ್ಳಾಪುರ, ಶಿಡ್ಲಟ್ಟ ಮತ್ತು ಚಿಂತಾಮಣಿ ಟಕದ ಟಿಕೆಟ್​ಗಳಲ್ಲಿ ಮಾತ್ರ ಮುದ್ರಿತವಾಗಿದೆ. ಇದನ್ನು ಈಗಾಗಲೇ ಸರಿಪಡಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ಸ್ಪಷ್ಟನೆ ನೀಡಿದೆ.

Join Whatsapp