ಕಾಶ್ಮೀರದಲ್ಲಿ ನಿಲ್ಲದ ನಾಗರಿಕರ ಹತ್ಯೆ: ವಲಸೆ ಕಾರ್ಮಿಕನನ್ನು ಗುಂಡಿಟ್ಟು ಕೊಂದ ಉಗ್ರರು

Prasthutha|

ಜಮ್ಮು ಕಾಶ್ಮೀರ: ಬ್ಯಾಂಕ್ ಮ್ಯಾನೇಜರ್ ಒಬ್ಬನನ್ನು ಗುಂಡು ಹಾರಿಸಿ ಕೊಂದ ಕೆಲವೇ ಗಂಟೆಗಳಲ್ಲಿ ಕಾಶ್ಮೀರದಲ್ಲಿ ಮತ್ತೋರ್ವನನ್ನು ಹತ್ಯೆ ನಡೆಸಲಾಗಿದೆ. ಬುದ್ಗಾಂ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಲಸೆ ಕಾರ್ಮಿಕನೊಬ್ಬನನ್ನು ಗುಂಡಿಟ್ಟು ಉಗ್ರರು ಹತ್ಯೆ ಮಾಡಿದ್ದಾರೆ. ದಾಳಿಯ ವೇಳೆ ಇನ್ನೊಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ.

- Advertisement -

ಕಳೆದ ದಿನ ಕುಲ್ಗಾಂನಲ್ಲಿ ಬ್ಯಾಂಕ್ ಮ್ಯಾನೇಜರ್ ನನ್ನು ಹತ್ಯೆ ನಡೆಸಲಾಗಿತ್ತು. ಅದಾದ ಕೆಲವೇ ಗಂಟೆಗಳಲ್ಲಿ ಬಿಹಾರ ಮೂಲದ ಕಾರ್ಮಿಕ ದಿಲ್ಕುಶ್ ಕುಮಾರ್ ನನ್ನು ಗುಂಡಿಟ್ಟು ಕೊಲ್ಲಲಾಗಿದೆ. ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಹತ್ಯೆ ನಡೆಸಿರುವ ಉಗ್ರರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದು. ಘಟನಾ ಪ್ರವೇಶದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp