ಗೋವಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಒಡೆಯಲು ಬಿಜೆಪಿ ಜೊತೆ ಗಣಿ, ಕಲ್ಲಿದ್ದಲು ಲಾಬಿ ಕೈಜೋಡಿಸಿದೆ: ದಿನೇಶ್ ಗುಂಡೂರಾವ್

Prasthutha|

ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಒಡೆಯಲು ಅನೇಕ ವಿಚ್ಛಿದ್ರಕಾರಿ ಶಕ್ತಿಗಳು ಕೈ ಜೋಡಿಸಿವೆ. ಗೋವಾ ಕಾಂಗ್ರೆಸ್ ನ್ನು ಒಡೆಯುವ ಷಡ್ಯಂತ್ರದ ಹಿಂದೆ ಕೇವಲ BJPಯಷ್ಟೇ ಅಲ್ಲ, ಇಲ್ಲಿನ ಗಣಿ ಮತ್ತು ಕಲ್ಲಿದ್ದಲಿನ ಲಾಬಿಯೂ ಕೆಲಸ ಮಾಡುತ್ತಿದೆ. ಗಣಿ ಮಾಫಿಯಾ ಮತ್ತು BJP ಸರ್ಕಾರ ಗೋವಾವನ್ನು ಪ್ರತಿಪಕ್ಷ ಮುಕ್ತ ರಾಜ್ಯ ಮಾಡುವ ಹುನ್ನಾರದಲ್ಲಿವೆ ಎಂದು ಗೋವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

- Advertisement -

ಫೇಸ್ ಬುಕ್ ಪೋಸ್ಟ್ ಮೂಲಕ ಈ ವಿಷಯ ಬಹಿರಂಗಪಡಿಸಿರುವ ದಿನೇಶ್ ಗುಂಡೂರಾವ್, ಗೋವಾ ರಾಜ್ಯವನ್ನು ಪ್ರತಿಪಕ್ಷ ಮುಕ್ತ ರಾಜ್ಯ ಮಾಡುವ BJPಯ ಹುನ್ನಾರ ನಡೆಯುವುದಿಲ್ಲ. ಗಣಿ ಮಾಫಿಯಾದ ಜೊತೆ ಶಾಮೀಲಾಗಿರುವ ಗೋವಾದ BJP ನೇತೃತ್ವದ ಸರ್ಕಾರ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗುತ್ತಿದೆ. ಗೋವಾ ಕಾಂಗ್ರೆಸ್ ಈ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಸದಾ ಹೋರಾಡಲಿದೆ. BJPಯ ಷಡ್ಯಂತ್ರಕ್ಕೆ ಗೋವಾ ಕಾಂಗ್ರೆಸ್ ಯಾವತ್ತೂ ಮಣಿಯುವುದಿಲ್ಲ ಎಂದು ಹೇಳಿದ್ದಾರೆ.

Join Whatsapp