ಶಬರಿಮಲೆಗೆ ಹೊರಟಿದ್ದ ಮಿನಿ ಬಸ್ ಬ್ರೇಕ್ ಫೇಲ್; ಆರು ಮಂದಿಗೆ ಗಾಯ

Prasthutha|

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆ ಹೊರಟಿದ್ದ ಮಿನಿ ಬಸ್ಸೊಂದರ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಆರು ಮಂದಿ ಯಾತ್ರಿಕರು ಗಂಭೀರ ಗಾಯಗೊಂಡಿರುವ ಘಟನೆ ಮುಂಡಾಜೆಯ ಉಳ್ಳಾಲ್ತಿ ಕಟ್ಟೆಯಲ್ಲಿ ನಡದಿದೆ.

- Advertisement -


ಗಾಯಾಳುಗಳನ್ನು ಕೂಡ್ಲಗಿ ತಾಲೂಕಿನ ಚಿಕ್ಕಜೋಗಿ ಹಳ್ಳಿಯ ಶಶಿ, ಜಲಧರ, ರಘು, ಬಸವರಾಜ್, ಲೋಕ ಎಂದು ಗುರುತಿಸಲಾಗಿದೆ. ವಾಹನ ನುಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ.


ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಒಟ್ಟು 6 ಆಂಬ್ಯುಲೆನ್ಸ್’ನಲ್ಲಿ ಪ್ರಯಾಣಿಕರನ್ನು ತಾಲೂಕಿನ ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ.

Join Whatsapp