ಶಿಕ್ಷಣ ಇಲಾಖೆಯ ಮೇಲೆ ಭ್ರಷ್ಟಾಚಾರದ ದೂರು: ತನಿಖೆ ಆಯೋಗ ರಚಿಸಲಾಗುವುದು ಎಂದ ಬಿ.ಸಿ. ನಾಗೇಶ್

Prasthutha|

ಬೆಂಗಳೂರು: ಶಿಕ್ಷಣ ಇಲಾಖೆಯ ಮೇಲೆ ಭ್ರಷ್ಟಾಚಾರದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲು ಪ್ರತ್ಯೇಕ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

- Advertisement -

ಈ ಕುರಿತು ಇಂದು ವಿಧಾನಸೌಧದಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಣ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದ್ದು, ಆಯೋಗ ರಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದೆಂದು ಅವರು ತಿಳಿಸಿದರು.

ಶಿಕ್ಷಕರಿಗೆ ನೀಡುವ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಇತರರ ಪ್ರಭಾವಕ್ಕೆ ಒಳಗಾಗಿಲ್ಲ. ಅದರಲ್ಲೂ ವಿಶೇಷವಾಗಿ ಮುಖ್ಯಮಂತ್ರಿ ಕಚೇರಿಯಿಂದ ಹಸ್ತಕ್ಷೇಪ ನಡೆದಿಲ್ಲ ಎಂದು ತಿಳಿಸಿದರು.

Join Whatsapp